ತಾಜಾ ಸುದ್ದಿ

 ನಾರಾಯಣ ನೇತ್ರಾಲಯದ ಡಾ.ಭುಜಂಗ ಶೆಟ್ಟಿ ಇಂದು ಹೃದಯಾಘಾತದಿಂದ ನಿಧನರಾದರು. 

Published

on

ಬೆಂಗಳೂರು, ಮೇ 20: ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಎಂದಿನಂತೆ ಕರ್ತವ್ಯಕ್ಕೆ‌ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್​ನಲ್ಲಿ ವ್ಯಾಯಾಮ ಮಾಡಿದ್ದರು. ಆಗ ಅವರು ಹೃದಯಾಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದರು.ಕೂಡಲೇ ಅವರನ್ನು ಬೆಂಗಳೂರಿನ ಯಶವಂತಪುರದಲ್ಲಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

Trending

Exit mobile version