ತಾಜಾ ಸುದ್ದಿ

ಬತ್ತಿದ ನೇತ್ರಾವತಿ ನದಿಯಲ್ಲಿ ಸೀತಾದೇವಿಯ ಪಾದ ದರ್ಶನ!

Published

on

ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ರಾಜ್ಯ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗಿದೆ. ಈ ಕಾರಣ ನದಿಯಲ್ಲಿರುವ ವಿಶೇಷಗಳು ಗೋಚರವಾಗಿದ್ದು, ಜನರು ಕೌತುಕಗಳ ದರ್ಶನಕ್ಕೆ ಮುಗಿ ಬಿದ್ದಿದ್ದಾರೆ. 

ಮಂಗಳೂರು: ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ರಾಜ್ಯ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಜಿಲ್ಲೆಯ ಜೀವ ನದಿ ನೇತ್ರಾವತಿಯು ತನ್ನ ಹರಿವನ್ನ ನಿಲ್ಲಿಸಿದ್ದಾಳೆ. ಮಳೆ ಬಾರದಿರುವ ಕಾರಣ ನೇತ್ರಾವತಿ ನದಿ(Netravathi River) ಬತ್ತಿರುವ ಕಾರಣ ಕುಡಿಯುವ ನೀರಿ‌ಗೂ ಸಮಸ್ಯೆ ಎದುರಾಗಿದೆ. ಸದ್ಯ ಎರಡು ದಿನಕ್ಕೊಮ್ಮೆ ತುಂಬೆ ಡ್ಯಾಂನಿಂದ ನೀರು ಮಂಗಳೂರು ನಗರಕ್ಕೆ ಪೂರೈಕೆ ಮಾಡಲಾಗುತ್ತಿದೆ. ಇನ್ನು ಗ್ರಾಮಾಂತರ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಕಟ್ಟಡ ಕಾಮಗಾರಿಗಳಿಗೆ ನೀರು ಬಳಸದಂತೆ ಜಿಲ್ಲಾಡಳಿತದ ಈಗಾಗಲೇ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

Trending

Exit mobile version