Connect with us

ಮನೋರಂಜನೆ

ಕನ್ನಡದ ‘ಕೊರಗಜ್ಜ’ಸಿನಿಮಾದಲ್ಲಿ ಬಾಲಿವುಡ್‌ ನಟ ಕಬೀರ್ ಬೇಡಿ ಅಭಿನಯ

Published

on

ಮುಂಬೈ, ಮೇ 26 : ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಕೆಲ ಬಾಲಿವುಡ್ ತಾರೆಯರು ಕನ್ನಡ ಇಂಡಸ್ಟ್ರಿಯತ್ತ ಮುಖ ಮಾಡಿದ್ದಾರೆ. ‘ಕಾಂತಾರ’  ಸಿನಿಮಾದ ಸಕ್ಸಸ್ ಕಂಡ ಬಳಿಕ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದ್ದು ಇದರಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿದ್ದಾರೆ. 

ಬಾಲಿವುಡ್ ನಟ ಕಬೀರ್ ಬೇಡಿ , ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ. ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರದಲ್ಲಿ ಬರುವ “ಉದ್ಯಾವರ ಅರಸರ” ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದಾರೆ. ಮಾತ್ರವಲ್ಲದೆ ನಿರ್ದೇಶಕರ “ವಿಷುವಲ್ ಇಮೇಜಿನೇಷನ್”ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ. “ಕೊರಗಜ್ಜ” ಸಿನಿಮಾದಲ್ಲಿ ಹಿರಿಯ ನಟಿ ಭವ್ಯ ಉದ್ಯಾವರ ಅರಸರನ್ನು ಎದುರುಹಾಕಿಕೊಳ್ಳುವ “ಪಂಜಂದಾಯಿ” ಎನ್ನುವ ರಾಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಎರಡು ಪಾತ್ರಗಳು ರಣರಂಗದಲ್ಲಿ ಸಂಧಿಸುವ ರೋಚಕ ಘಟನೆಯನ್ನು ಐದು ಕ್ಯಾಮರಾಗಳಲ್ಲಿ ಚಿತ್ರೀಕರಿಸಲಾಗಿದೆ. ಇದು ಚಿತ್ರದ ಹೈಲೈಟ್ ಗಳಲ್ಲಿ ಒಂದು.

ಶೂಟಿಂಗ್ ವೇಳೆ ಕಬೀರ್ ಬೇಡಿ ತನ್ನ ಪಾತ್ರಕ್ಕೆ ತಾನೇ ಡಬ್ಬಿಂಗ್ ಮಾಡುತ್ತೇನೆ ಎಂದಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾಕೆಂದರೆ, ಬಾಲಿವುಡ್, ಹಾಲಿವುಡ್, ಯುರೋಪಿಯನ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದ ಅದರಲ್ಲೂ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾದ ಡಬ್ಬಿಂಗ್‌ಗೆ ಸಾಥ್ ನೀಡಿದ್ದಾರೆ.ಮುಂಬೈನ ಪ್ರತಿಷ್ಟಿತ ಸ್ಟುಡಿಯೋ ಒಂದರಲ್ಲಿ ದಿನಕ್ಕೆ ಎರಡು-ಮೂರು ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

‘ಕೊರಗಜ್ಜ’ ಸಿನಿಮಾದ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟ್ಟಿಸಿದ್ದು, ದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.ಈ ಸಿನಿಮಾದಲ್ಲಿ ಭವ್ಯ ಅವರು ಪ್ರಮುಖ್ಯ ಪಾತ್ರದಲ್ಲಿ ನಟಿಸಿ ದ್ದು,ನಾಲ್ಕೈದು ಕ್ಯಾಮೆರಾಗಳನ್ನ ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading