ಕ್ರೈಂ ನ್ಯೂಸ್

ಉಳ್ಳಾಲ : ದಾರಿಮಧ್ಯೆ ಯುವತಿ ಮೇಲೆ ಲೈಂಗಿಕ ಕಿರುಕುಳ

Published

on

ಉಳ್ಳಾಲ, ಜೂ 10 (Zoom Karnataka) : ಕೆಲಸದಿಂದ ವಾಪಸ್ಸಾಗುತ್ತಿದ್ದ ಯುವತಿ ಮೇಲೆ ಹೊರರಾಜ್ಯದ ಕಾರ್ಮಿಕ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನತಲಪಾಡಿಯಲ್ಲಿ ಇಂದು ಸಂಜೆ ಸಂಭವಿಸಿದೆ. ಉತ್ತರಪ್ರದೇಶ ಮೂಲದ ರಾಮು ಕೆ. ಎಂಬಾತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳೂರಿಗೆ ಕೆಲಸಕ್ಕೆ ತೆರಳಿ ಮನೆಗೆ ವಾಪಸ್ಸಾಗುವ ಸಂದರ್ಭ ದಾರಿಮಧ್ಯೆ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿ ಆರೋಪಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಘಟನೆಯಿಂದ ಬೆದರಿದ ಯುವತಿ ಬೊಬ್ಬಿಟ್ಟಾಗ ಸ್ಥಳೀಯರು ಓಡಿಬಂದು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿ ಹಿಡಿದು ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Trending

Exit mobile version