ಕ್ರೈಂ ನ್ಯೂಸ್

ಕಾಂಗ್ರೆಸ್ ಕಾರ್ಯಕರ್ತನನ್ನು ಪ. ಬಂಗಾಳದಲ್ಲಿ ಗುಂಡಿಕ್ಕಿ ಹತ್ಯೆ

Published

on

ಕೋಲ್ಕ್ಕತ್ತಾ, ಜೂ 10 (Zoom Karnataka): ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮೃತರನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ, ಅವರು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದು, ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಕೇರಳದಲ್ಲಿ ಕೆಲಸ ಮಾಡುತ್ತಿದ್ದ ಅವರು 10 ದಿನಗಳ ಹಿಂದೆ ಬಂಗಾಳದ ತಮ್ಮ ಗ್ರಾಮಕ್ಕೆ ಬಂದಿದ್ದರು.

ತನ್ನ ಸ್ನೇಹಿತರೊಂದಿಗೆ ಇಸ್ಪೀಟು ಆಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಪೊಲೀಸರ ಪ್ರಕಾರ, ಗೂಂಡಾಗಳ ಗುಂಪು ಫೂಲ್‌ಚಂದ್ ಮತ್ತು ಅವನ ಸ್ನೇಹಿತರ ಮೇಲೆ ದಾಳಿ ಮಾಡಿ ಗುಂಡು ಹಾರಿಸಿತು.

ಈ ಘಟನೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಪತ್ರ ಬರೆದು ಚುನಾವಣೆಗೆ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿದ್ದಾರೆ. ಜುಲೈ 8 ರಂದು ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗಳು ನಡೆಯಲಿವೆ.

Leave a Reply

Your email address will not be published. Required fields are marked *

Trending

Exit mobile version