Connect with us

ತಾಜಾ ಸುದ್ದಿ

ಉಳ್ಳಾಲ ಸೋಮೇಶ್ವರದಲ್ಲಿ ಭೀಕರ ಕಡಲ್ಕೊರೆತ ಅನೇಕ ಮನೆಗಳು,ಸಮುದ್ರದ ಅಲೆಗಳಿಗೆ ಕೊಚ್ಚಿಹೋಗುವ ಸಾಧ್ಯತೆ.

Published

on

ಉಳ್ಳಾಲ ಸೋಮೇಶ್ವರದಲ್ಲಿ ಭೀಕರ ಕಡಲ್ಕೊರೆತ ಅನೇಕ ಮನೆಗಳು,ಸಮುದ್ರದ ಅಲೆಗಳಿಗೆ ಕೊಚ್ಚಿಹೋಗುವ ಸಾಧ್ಯತೆ.

ಉಳ್ಳಾಲ, ಜೂ 13 (Zoom Karnataka): ಮಳೆಯಿಂದಾಗಿ ಸಮುದ್ರವು ಬಿರುಸುಗೊಂಡಿದ್ದು ಉಳ್ಳಾಲದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದಮನೆಗಳಿಗೆ ಅಲೆಗಳು ಜೋರಾಗಿದ್ದು ದಡಕ್ಕೆ ಅಪ್ಪಳಿಸುತ್ತಿದೆ.

ಉಳ್ಳಾಲದ ತೀರದ ಪ್ರದೇಶಗಳಾದ ಕೈಕೋ, ಸೀಗ್ರೌಂಡ್, ಮೊಗವೀರಪಟ್ಣ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದೆ.

ಇನ್ನು ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಸ್ಥಳಿಯ ಶಾಸಕ, ವಿಧಾನ ಸಭಾ ಸಭಾಪತಿ ಯು ಟಿ ಖಾದರ್ ಈ ಪ್ರದೇಶಗಳಿಗೆ ಭಾನುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ತಡೆಗೆ ಮುಂದಿನ ವರ್ಷದಿಂದಲೇ ಶಾಶ್ವತ ಕಾಮಗಾರಿ ಕೈಗೊಳ್ಳುವ ಭರವಸೆ ನೀಡಿದ್ದಾರೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading