Connect with us

ರಾಜ್ಯ ಸುದ್ದಿ

ಪತ್ರಕರ್ತರಿಗೆ ಮುಖ್ಯಮಂತ್ರಿ ಅಭಯ…ಕೆಯುಡಬ್ಲ್ಯೂಜೆ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ, ಚರ್ಚೆ

Published

on

ಪತ್ರಕರ್ತರಿಗೆ ಮುಖ್ಯಮಂತ್ರಿ ಅಭಯ…ಕೆಯುಡಬ್ಲ್ಯೂಜೆ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ, ಚರ್ಚೆ

ಬೆಂಗಳೂರು, ಜೂ.12 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.

ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿ ಗಾಗಿ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ, ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು, ಮನವಿ ಅರ್ಪಿಸಲಾಯಿತು.
ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ತಾರತಮ್ಯ ಇಲ್ಲದಂತೆ ಜಾಹಿರಾತು ಬಿಡುಗಡೆ, ಬಾಕಿ ಬಿಲ್ ಮಂಜೂರು ಹಾಗೂ ಪ್ರೋತ್ಸಾಹದಾಯಕ ಜಾಹಿರಾತುಗಳಿಗೆ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ಕೋರಲಾಯಿತು. ಮನವಿಯಲ್ಲಿನ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.


ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರ್,
ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ,
ಜಿಲ್ಲಾ ಪದಾಧಿಕಾರಿಗಳಾದ ದಿನೇಶ್ ಗೌಡಗೆರೆ, ಶಿವಕುಮಾರ ಸ್ವಾಮಿ, ಚಲುವರಾಜು, ಸಿ.ಎನ್.ಕುಮಾರ್, ಸೋಮಶೇಖರ ಗಾಂಧಿ, ಜುಕ್ರಿಯಾ, ರಾಜು, ರಾಯಚೂರು ವೀರಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading