Connect with us

ರಾಜಕೀಯ

ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ಶಾಸಕ ಕಾಮತ್

Published

on

Zoom Karnataka ಜೂ. 15 : ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ಸು ಪಡೆಯುವ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಸ್ಪಷ್ಟವಾಗಿ ವಿರೋಧಿಸುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮತಾಂತರ ಎಂಬದು ಒಂದು ಸಾಮಾಜಿಕ ಪಿಡುಗು. ಇದು ಸಮಾಜದ ಅವನತಿಗೆ ಕಾರಣವಾಗಬಲ್ಲದು ಎನ್ನುವ ಸದುದ್ಧೇಶದಿಂದ ನಮ್ಮ ಸರಕಾರದ ಅವಧಿಯಲ್ಲಿ ಬಲವಂತದ ಮತಾಂತರ ನಿಷೇಧಿಸುವ ಕಾಯಿದೆ ಜಾರಿಗೊಳಿಸಲಾಗಿತ್ತು.‌ ಆದರೆ ಈಗ ಆಮಿಷಗಳನ್ನೊಡ್ಡಿ, ಬೆದರಿಸಿ ಮತಾಂತರ ಮಾಡುವವರಿಗೆ ಶಿಕ್ಷೆ ವಿಧಿಸುವ ಕಾನೂನನ್ನು ರದ್ದುಪಡಿಸುವ ನಿರ್ಧಾರ ಮೂಲಕ ಕಾಂಗ್ರೆಸ್ ಸಮಾಜಕ್ಕೆ ಏನು ಸಂದೇಶ ನೀಡಲು ಹೊರಟಿದೆ ?. ಮುಕ್ತವಾಗಿ ಮತಾಂತರಗೊಳಿಸಲು ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಆಹ್ವಾನ ನೀಡುತ್ತಿದೆಯೇ ? ಎಂದು ಅವರು ಪ್ರಶ್ನಿಸಿದ್ದಾರೆ.‌

ಬಲವಂತದಿಂದ ಮತಾಂತರ ಮಾಡುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆಗೊಳಪಡಿಸುವ ಕಾಯಿದೆಯನ್ನು ರದ್ದುಪಡಿಸುವ ಮೂಲಕ ರಾಜ್ಯದಲ್ಲಿ ಮತಾಂತರಿಗಳ ಅಟ್ಟಹಾಸಕ್ಕೆ ರತ್ನ ಕಂಬಳಿ ಹಾಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನಿರಂತರವಾಗಿ ಹಿಂದೂ ಸಮಾಜವನ್ನು ಒಡೆಯುವ ಕೃತ್ಯವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಶಾಸಕ ಕಾಮತ್ ಆರೋಪಿಸಿದ್ದಾರೆ.

ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ಸು ಪಡೆಯುವ ತನ್ನ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಇಡೀ ಹಿಂದೂ ಸಮಾಜ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading