Connect with us

ರಾಜ್ಯ ಸುದ್ದಿ

ಹೊಸ ಸರ್ಕಾರಿ ಪಿಯು ಕಾಲೇಜು ಆರಂಭಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಣ ಪ್ರೇಮಿ

Published

on

ವಿಜಯಪುರ ಜೂ16(Zoom Karnataka): ಅನುಮೋದನೆಗೊಂಡ 46 ಹೊಸ ಸರ್ಕಾರಿ ಪಿಯು ಕಾಲೇಜು ಆರಂಭಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಶಿಕ್ಷಣ ಪ್ರೇಮಿ, ಹೋರಾಟಗಾರ ವಿಜಯರಂಜನ್ ಜೋಷಿ ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಗ್ರಾಮದ ನಿವಾಸಿ ವಿಜಯರಂಜನ್ ಜೋಷಿ ಮುಖ್ಯಮಂತ್ರಿಗೆ ಮಾತ್ರವಲ್ಲದೆ, ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ನಿರ್ದೇಶಕರು, ಶಾಸಕರಿಗೂ ಸಹ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಬಿಜೆಪಿ ಸರ್ಕಾರ 2022-23ನೇ ಸಾಲಿನಲ್ಲಿ ನಾಲತವಾಡ ಪಟ್ಟಣ ಸೇರಿದಂತೆ ರಾಜ್ಯಾದ್ಯಂತ 46 ಹೊಸ ಪಿಯು ಕಾಲೇಜುಗಳಿಗೆ ಅನುಮೋದನೆ ಕೊಟ್ಟಿತ್ತು. ಆದರೆ ಶೈಕ್ಷಣಿಕ ವರ್ಷದ ಪ್ರವೇಶಾತಿ ಮುಗಿಯುತ್ತಾ ಬಂದಿದ್ದರೂ ಹೊಸ ಪಿಯು ಕಾಲೇಜು ಇನ್ನೂ ಆರಂಭವಾಗದ ಹಿನ್ನಲೆಯಲ್ಲಿ ಶಿಕ್ಷಣ ಪ್ರೇಮಿ ಹೋರಾಟಗಾರ ವಿಜಯರಂಜನ್ ಜೋಷಿ ಪತ್ರ ಬರೆದಿದ್ದಾರೆ. ಶೀಘ್ರದಲ್ಲೇ ಹೊಸ ಪಿಯು ಕಾಲೇಜಿನಲ್ಲಿ ಪ್ರವೇಶಾತಿಗೆ ಅವಕಾಶ ಕೊಡಿ ಎಂದು ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಹೊಸ ಪಿಯು ಕಾಲೇಜುಗಳು ಪ್ರಾರಂಭವಾದರೆ 15 ರಿಂದ 20 ಸಾವಿರ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂಬುದನ್ನು ಪತ್ರದಲ್ಲಿ ದೃಢಪಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುದ್ದೇಬಿಹಾಳ ಶಾಸಕ ಸಿಎಸ್ ನಾಡಗೌಡರಿಗೆ ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ್ದಾರೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading