Connect with us

ರಾಜಕೀಯ

ಸರ್ಕಾರ ಅಕ್ಕಿ ಬದಲು ಹಣದ ಜೊತೆಗೆ ರಾಗಿ, ಜೋಳ ಕೊಡಬೇಕು- ನಟ ಚೇತನ್

Published

on

ಕಲಬುರಗಿ,ಜೂ29(Zoom Karnataka): ರಾಜ್ಯ ಸರಕಾರ ಅಕ್ಕಿ ಬದಲು ಹಣ ಕೊಡುವ ವಿಚಾರವಾಗಿ ನಟ ಚೇತನ್ ಮಾತನಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆಯಬೇಕು ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅಹಿಂಸಾ ಚೇತನ್​, ಸರ್ಕಾರ ಅಕ್ಕಿ ಬದಲು ಹಣ ಜೊತೆಗೆ ರಾಗಿ, ಜೋಳ ಕೊಡಬೇಕು. ಬಡವರಿಗೆ ಶಿಕ್ಷಣ ನೀಡಬೇಕು, ಭೂ ಸುಧಾರಣೆ ಮಾಡಿ, ರಾಷ್ಟ್ರೀಕರಣ ಮಾಡಬೇಕು. ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಬೇರೆ ರಾಜ್ಯಕ್ಕೆ ಮೊರೆ ಹೊಗ್ತಿದೆ. ನಮ್ಮ ರೈತರನ್ನು ಬೆಳೆಸುವ‌ ಕೆಲಸವಾಗಬೇಕಿದೆ ಎಂದು ಹೇಳಿದ್ದಾರೆ.

ನಂತರ ಮಾತನಾಡಿದ ಚೇತನ್​ ಅವರು, ಕೆ ಜೆ ಜಾರ್ಜ್ ಬಡವರಿಗೆ ದುಡ್ಡು ಬೇಡ ಅಂತಾರೆ. ಸರ್ಕಾರ ದುಡ್ಡು, ರಾಗಿ ಜೋಳ ಎಲ್ಲವನ್ನೂ ‌ಕೊಡಬೇಕು. ಸಚಿವ ಕೆ ಜೆ ಜಾರ್ಜ್ ಒಬ್ಬ ಶ್ರೀಮಂತ ವ್ಯಕ್ತಿ ಈ ರೀತಿ ‌ಮಾತಾಡೋದು ಅವರಿಗೆ ಶೋಭೆ ತರೋದಿಲ್ಲ ಎಂದು ಹೇಳಿದ್ದಾರೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading