ತಾಜಾ ಸುದ್ದಿ

ವಿಟ್ಲದಲ್ಲಿ ಸೌಜನ್ಯ ನ್ಯಾಯಪರ ಹೋರಾಟ -ರಸ್ತೆಯಲ್ಲಿ ಜನರನ್ನು ಒಟ್ಟು ಸೇರಿಸಿಯೇ ನ್ಯಾಯ ಭಿಕ್ಷೆ ಕೇಳುವುದು-ತಿಮರೊಡಿ

Published

on

ವಿಟ್ಲ ,ಸೆ 25 (Zoom Karnataka):ನ್ಯಾಯಾಲಯಕ್ಕೆ ಹೋಗದೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟು, ರಸ್ತೆಯಲ್ಲಿ ಜನರನ್ನು ಒಟ್ಟು ಸೇರಿಸಿ ನ್ಯಾಯ ಭಿಕ್ಷೆ ಕೇಳಲಾಗುವುದು. ಧರ್ಮದ ಹೆಸರಿನಲ್ಲಿ ಧಾರ್ಮಿಕ ಭಯೋತ್ಪಾದಕರನ್ನು ರಕ್ಷಣೆ ಮಾಡಲಾಗುತ್ತಿದೆ. ಸರ್ಕಾರ ಪ್ರಕರಣದ ಮರುತನಿಗೆ ಆದೇಶಿಸುವ ಕಾರ್ಯ ಮಾಡಲಿ. ಪ್ರಕರಣದಲ್ಲಿ ಸತ್ಯವಿಲ್ಲದೇ ಹೋದಲ್ಲಿ ಹೋರಾಟ ಮಾಡಲು ಮುಂದಾದಾಗ ನ್ಯಾಯದೇವತೆ ಶಿಕ್ಷಿಸುವ ಕಾರ್ಯ ಮಾಡಬೇಕಿತ್ತು. ವಿಟ್ನೆಸ್ ನೀಡುವ ಕಾರ್ಯವನ್ನು ಮುಂದಿನ ದಿನದಲ್ಲಿ ನಡೆಸಲಿದೆ ಎಂದುಸೌಜನ್ಯ ನ್ಯಾಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.

ಭಾನುವಾರ ವಿಟ್ಲ ಹಳೆ ಬಸ್ ನಿಲ್ದಾಣದಲ್ಲಿ ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ದೈವ ಚಿಂತಕ ತಮ್ಮಣ್ಣ ಶೆಟ್ಟಿ ಮಾತನಾಡಿ, ತ್ಯಾಗ ಬಲಿದಾನ ಜಾಗದಲ್ಲಿ ವಿಕೃತಿಯನ್ನು ಮೆರೆದವರಿಗೆ ತಕ್ಕಶಾಸ್ತಿಯಾಗಬೇಕು. ಸ್ತ್ರೀಶಕ್ತಿ ತುಳುನಾಡನ್ನು ಕಟ್ಟಿದ ಶಕ್ತಿಯಾಗಿದೆ. ದುಷ್ಟ ಶಕ್ತಿ, ಕೂಟದ ವಿರುದ್ಧ ನಮ್ಮ ಹೋರಾಟವಾಗಿದೆ ಎಂದರು.

ನ್ಯಾಯಪರ ಹೋರಾಟಗಾರ ಗಿರೀಶ್ ಮಠ್ಠಣ್ಣನವರ್ ಮಾತನಾಡಿ, ಧರ್ಮವನ್ನು ಗುರಾಣಿಯಾಗಿ ಬಳಸಲಾಗುತ್ತಿದೆ. ಬೀದಿ ಹೋರಾಟಗಳನ್ನು ಮಾಡುತ್ತಿರುವ ಕಾರಣ ಎಲ್ಲರಿಗೆ ಧೈರ್ಯ ಬಂದಿದೆ ಮತ್ತು ಹೆಣಗಳು ಬೀಳುವುದು ಕಡಿಮೆಯಾಗಿದೆ.  ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ನಿಲ್ಲಬೇಕು. ಈ ಹೋರಾಟ ಸರ್ಕಾರಗಳ ವಿರುದ್ಧವಲ್ಲ, ನ್ಯಾಯಕ್ಕಾಗಿ ಮಾತ್ರವಾಗಿದೆ ಎಂದರು.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ಕುಟುಂಬ ಸೆರಗೊಡ್ಡಿ ನ್ಯಾಯಕ್ಕಾಗಿ ಎಲ್ಲರ ಸಹಕಾರ ಬೇಡಿದರು. ವಿವಿಧ ಸಂಘಟನೆಗಳ ಸಹಕಾರದಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ರಥದ ಗದ್ದೆಯ ಬಳಿಯಿಂದ ವಿಟ್ಲ ಹಳೆ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಯಿತು.ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು, ಹಿರಿಯರಾದ ವೀರಪ್ಪ ಗೌಡ, ಉದ್ಯಮಿ ಸುರೇಶ್ ಶೆಟ್ಟಿ ಮುಂಬಯಿ ಮತ್ತಿತರರು ಉಪಸ್ಥಿತರಿದ್ದರು.ಪುರಂದರ ಇಂದ್ರಪಡ್ಪು ಪ್ರಾರ್ಥಿಸಿದರು. ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಬೆಂಞನ್ತಿಮಾರು ಸ್ವಾಗತಿಸಿ, ಪ್ರಸ್ತಾವನೆಗೈದರು. ವಂದಿಸಿದರು. ಹರೀಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Trending

Exit mobile version