ತಾಜಾ ಸುದ್ದಿ

ಸ್ಯಾಂಡಲ್‌ವುಡ್‌ ಸ್ಟಾರ್‌ ಡಾ.ಶಿವರಾಜ್ ಕುಮಾರ್ ಆರೋಗ್ಯಲ್ಲಿ ಏರುಪೇರು: ಆಸ್ಪತ್ರೆಗೆ ತೆರಳಿ ಚಿಕಿತ್ಸೆ

Published

on

ಬೆಂಗಳೂರು,ನ 04(Zoom Karnataka): ಸ್ಯಾಂಡಲ್‌ವುಡ್‌ ಸ್ಟಾರ್‌ ಕನ್ನಡದ ಹೆಸರಾಂತ ನಟ ಡಾ.ಶಿವರಾಜ್ ಕುಮಾರ್ ಆರೋಗ್ಯಲ್ಲಿ ಏರುಪೇರಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದು, ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚಿತ್ರವೊಂದರ ಶೂಟಿಂಗ್‌ನಲ್ಲಿ ಶಿವಣ್ಣ ಪಾಲ್ಗೊಂಡಿದ್ದರು. ಈ ವೇಳೆ ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ಸುಸ್ತಾಗಿದ್ದರು. ಅವರು ತೀವ್ರ ಸುಸ್ತಾಗುತ್ತಿದ್ದಂತೆಯೇ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಿವಣ್ಣನಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಅವರಿಗೆ ನಿನ್ನೆಯೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಿದ್ದಾರೆ. ಸದ್ಯ ಮನೆಯಲ್ಲಿ ಶಿವಣ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ತಪಾಸಣೆ ನಂತರ ಆತಂಕ ಪಡುವಂಥದ್ದು ಏನೂ ಆಗಿಲ್ಲ ಎಂದು ವೈದ್ಯರೇ ಸ್ಪಷ್ಟ ಪಡಿಸಿದ್ದಾರೆ.

ಈ ಹಿಂದೆ ಶಿವಣ್ಣಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ಆತಂಕ ಮೂಡಿತ್ತು. ಸದ್ಯ ಶಿವಣ್ಣ ಆರಾಮಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಬಳಿಕ ಅವರು ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version