ತಾಜಾ ಸುದ್ದಿ

ದರ್ಶನ್‌ಗೆ ಕೆಲವು ಷರತ್ತುಗಳನ್ನು ವಿಧಿಸಿದ ಕೋರ್ಟ್

Published

on

  • ಬೆಂಗಳೂರು, ಅ.30(Zoom Karnataka): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಇಂದು 6 ವಾರಗಳ ಮಧ್ಯಂತರ ಜಾಮೀನನ್ನು ನೀಡಿದೆ. ಕೋರ್ಟ್ ಈ ಜಾಮೀನನ್ನು ಕೆಲ ಷರತ್ತು ವಿಧಿಸಿ ಮಂಜೂರು ಮಾಡಿದೆ.

ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ದರ್ಶನ್‌ಗೆ ವೈದ್ಯಕೀಯ ವರದಿ ಆಧರಿಸಿಯೇ ಮಧ್ಯಂತರ ಜಾಮೀನು ನೀಡಲಾಗಿದೆ. ಹೀಗಾಗಿ, ದರ್ಶನ್ ಅವರು ಮಂಜೂರಾಗಿರುವ 6 ವಾರಗಳ ಜಾಮೀನನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು.

ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದ ನಂತರ ಕೆಲ ಷರತ್ತುಗಳನ್ನು ಕೋರ್ಟ್ ಹಾಕಿದೆ. ಅದರಂತೆ ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದು. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್​ಗೆ ಸಲ್ಲಿಸಬೇಕು. ಪಾಸ್‌ಪೋರ್ಟ್ ಅನ್ನು ಕೋರ್ಟ್​ಗೆ ಸರೆಂಡರ್ ಮಾಡಬೇಕು. ಜೊತೆಗೆ ಶೂಂಟಿಂಗ್ ಮಾಡುವಂತಿಲ್ಲ ಎಂದು ದರ್ಶನ್‌ಗೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

Trending

Exit mobile version