ಕ್ರೈಂ ನ್ಯೂಸ್

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು

Published

on

ಬಳ್ಳಾರಿ,ಡಿ07(Zoom Karnataka) : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ‌ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.

ಲೋಕಾಯುಕ್ತ ಎಸ್​​ಪಿ ಸಿದ್ದರಾಜು ನೇತೃತ್ವದಲ್ಲಿ 25ಕ್ಕೂ ಹೆಚ್ಚು ಲೋಕಾಯುಕ್ತ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಳ್ಳಾರಿ, ಹೊಸಪೇಟೆ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಆಗಮಿಸಿದ್ದಾರೆ.

ಬಾಣಂತಿಯರ ಸರಣಿ ಸಾವಿನ ಬಗ್ಗೆ ಲೋಕಾಯುಕ್ತ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್​​ಗೆ ಪ್ರತ್ಯೇಕ ತಂಡಗಳಲ್ಲಿ ಭೇಟಿ ನೀಡಿದ್ದು, ಬಾಣಂತಿಯರ ‌ಸಾವಿನ ಕುರಿತು ತನಿಖೆ ಕೈಗೊಂಡಿದ್ದಾರೆ.‌ ಹೆರಿಗೆ, ಐಸಿಯು, ಔಷಧಿ ದಾಸ್ತಾನು ಉಗ್ರಾಣಕ್ಕೆ ಭೇಟಿ ನೀಡಿ ಪರಿಶೀಲನೆ‌ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version