Connect with us

ರಾಷ್ಟ್ರ ಸುದ್ದಿ

ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ – ಪೋಟೊ ವೈರಲ್

Published

on

ಒಟ್ಟೋವಾ, ಜೂ 09(Zoom Karnataka): ಇಂದಿರಾ ಗಾಂಧಿ ಅವರ ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರವನ್ನು ಖಲಿಸ್ತಾನಿ ಬೆಂಬಲಿಗರು ಮೆರವಣಿಗೆ ಮಾಡಿರುವ ಘಟನೆ ಕೆನಡಾದಲ್ಲಿ ನಡೆದಿದೆ.
1984 ಅಕ್ಟೋಬರ್‌ 31 ರಂದು ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಧಾನಿಯ ಭದ್ರತಾ ಸಿಬ್ಬಂದಿಗಳೇ ಹತ್ಯೆ ಮಾಡಿದ್ದರು. ಆ ಸಂದರ್ಭವನ್ನು ಸ್ತಬ್ಧಚಿತ್ರದಲ್ಲಿ ಬಿಂಬಿಸಲಾಗಿತ್ತು.

ಇನ್ನು ಜೂ. 6 ರಂದು ‘ಆಪರೇಷನ್‌ ಬ್ಲೂ ಸ್ಟಾರ್‌’ ಆಚರಣೆಗೂ ಮೊದಲು ಜೂ.4 ರಂದು ಖಲಿಸ್ತಾನಿ ಬೆಂಬಲಿಗರು ಪರೇಡ್‌ ಆಯೋಜಿಸಿದ್ದು, ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕೊಲೆಗಾರರು ಹತ್ಯೆ ಮಾಡುತ್ತಿರುವ ಸಂದರ್ಭದ ಸ್ತಬ್ಧಚಿತ್ರ ನಿರ್ಮಿಸಲಾಗಿದೆ.

ಕೊಲೆ ಮಾಡಿದವರು ಪ್ರಧಾನಿ ಭದ್ರತಾ ಸಿಬ್ಬಂದಿಯೇ ಆಗಿದ್ದರು. ಆ ಸ್ತಬ್ಧಚಿತ್ರದಲ್ಲಿ ‘ಶ್ರೀ ದರ್ಬಾರ್ ಸಾಹಿಬ್ ಮೇಲಿನ ದಾಳಿಗೆ ಪ್ರತೀಕಾರ’ ಎಂದು ಹೇಳುವ ಫಲಕ ಅಳವಡಿಸಲಾಗಿದೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading