Connect with us

ತಾಜಾ ಸುದ್ದಿ

ಚಂದ್ರಯಾನ 3 ಉಡಾವಣೆಯ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ಎನ್ ಎನ್.ವಲಮರ್ತಿ ನಿಧನ

Published

on

ಬೆಂಗಳೂರು, ಸೆ 04 (Zoom Karnataka):ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿ ಎನ್ ಎನ್.ವಲಮರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಚಂದ್ರಯಾನ-3 ಕೌಂಟ್ ಡೌನ್ ನೀಡಿದ್ದರು. ರಾಕೆಟ್ ಉಡಾವಣೆಯ ಸಮಯದಲ್ಲಿ ಕೌಂಟ್​ಡೌನ್ ಎಂಬುದು ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ.

ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್‌ಎಸ್ ಐಸಿ, ಐಆರ್‌ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.

ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ – ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading