Connect with us

ತಾಜಾ ಸುದ್ದಿ

ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಡೀಲ್, 7 ಕೋಟಿ ವಂಚನೆ ಆರೋಪ

Published

on

ಬೆಂಗಳೂರು,ಸೆ 13 [Zoom Karnataka] : ಹಿಂದೂ ಸಂಘಟನೆಯ ನಾಯಕಿ, ಚೈತ್ರಾ ಕುಂದಾಪುರ ರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಂದೂರುನ ಸಮಾಜ ಸೇವಕರೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಚೈತ್ರಾರನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಇಬ್ಬರು ಆರೋಪಿಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣದಲ್ಲಿ ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ…

ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಚೈತ್ರಾ ಹಾಗೂ ಅವರ ಸಂಗಡಿಗರು ಕೇಂದ್ರದ ನಾಯಕರು ಹಾಗೂ ಆರೆಸ್ಸೆಸ್ ಮುಖಂಡರ ಹೆಸರಲ್ಲಿ ಈ ಮೋಸ ಮಾಡಿದ್ದಾರೆ. ಚೈತ್ರ ಹಾಗೂ ನಾಲ್ಕೈದು ಜನರ ತಂಡ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರ ತಂಡವನ್ನೂ ಸೃಷ್ಟಿಮಾಡಿದ್ದರು ಎನ್ನಲಾಗಿದೆ. ಈಗ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ನಾಯಕ್ ಪೆಲತ್ತೂರು ಪೊಲೀಸರ ಅತಿಥಿಯಾಗಿದ್ದಾರೆ. ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಗನ್ ಕಡೂರು ಹಾಗೂ ಪ್ರಸಾದ್ ರನ್ನು ವಶಕ್ಕೆ ಪಡೆಯಲಾಗಿತ್ತು.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading