Connect with us

ಕ್ರೈಂ ನ್ಯೂಸ್

ದಂಪತಿಗೆ ಕಾರು ಡಿಕ್ಕಿ ಪತ್ನಿ ಸಾವು-ಸ್ಯಾಂಡಲ್‌ವುಡ್ ನಟ ನಾಗಭೂಷಣ ಬಂಧನ.

Published

on

ಬೆಂಗಳೂರು ಓ 02 (Zoom Karnataka) : ದಂಪತಿಗೆ ಕಾರು ಡಿಕ್ಕಿ ಹೊಡೆದು ಪತ್ನಿ ಸಾವಿಗೆ ಕಾರಣನಾದ ಸ್ಯಾಂಡಲ್‌ವುಡ್ ನಟ ನಾಗಭೂಷಣ ಅವರನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ.

ಕುಮಾರಸ್ವಾಮಿ ಲೇಔಟ್ ನ ವಸಂತನಗರ ಮುಖ್ಯರಸ್ತೆಯ ಬಳಿ ನಿನ್ನೆ ರಾತ್ರಿ ದಂಪತಿಯು ನಡೆದುಕೊAಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದ್ದು ನಟನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಅಪಘಾತದ ಕುರಿತು ನಟ ನಾಗಭೂಷಣ ಮಾತನಾಡಿ ರಾತ್ರಿ ನಾನು ನನ್ನ ಸ್ನೇಹಿತರನ್ನು ನೋಡಲು ಆರ್.ಆರ್ ನಗರಕ್ಕೆ ಹೋಗಿ, ಸ್ನೇಹಿತರನ್ನು ಭೇಟಿ ಮಾಡಿಕೊಂಡು ವಾಪಸ್ ಜೆ.ಪಿ. ನಗರದಲ್ಲಿರುವ ನಮ್ಮ ಮನೆಗೆ ನನ್ನ ಕಾರಿನಲ್ಲಿ ಹೋದೆ. ಸುಮಾರು 9.45ಗಂಟೆಯ ಸಮಯದಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಪುರುಷ ಮಹಿಳೆಯು ಪುಟ್ ಪಾತ್ ಮೇಲಿಂದ ರಸ್ತೆಯ ಕೆಳಗೆ ಇಳಿದು ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ನಾನು ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ ನಂತರ ಮುAದೆ ಹೋಗಿ ಪುಟ್ ಪಾತ್ಮೇ ಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು. ತಕ್ಷಣ ನಾನು ಆಸ್ಪತ್ರೆಗೆ ಸೇರಿಸಬೇಕೆಂದು ಕಾರು ಸ್ಟಾರ್ಟ್ ಮಾಡಿದೆ. ಆದರೆ ಕಾರು ಸ್ಟಾರ್ಟ್ ಆಗಿಲ್ಲ. ಆಟೋರಿಕ್ಷಾದಲ್ಲಿ ಅಲ್ಲಿದ್ದ ಜನರ ಜತೆ ಸೇರಿಕೊಂಡು ಗಾಯಾಳುಗಳನ್ನು ಕೂರಿಸಿಕೊಂಡು ಅಸ್ಟಾç ಆಸ್ಪತ್ರೆಗೆ ಕರೆದುಕೊಂಡು ಬAದು ದಾಖಲು ಮಾಡಿದಾಗ ವೈದ್ಯರು ಬರುವ ದಾರಿಯ ಮಧ್ಯದಲ್ಲಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದಾರೆ.

ರಾತ್ರಿಯೇ ನಾಗಭೂಷಣ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಿಂಕ್ಸ್ ಮಾಡಿಲ್ಲ ಎಂದು ಪತ್ತೆಯಾಗಿದೆ. ಇದು ಡ್ರಿಂಕ್ ಆಂಡ್ ಡ್ರೆöÊವ್ ಕೇಸ್ ಅಲ್ಲ ಎಂದು ಕೂಡ ಮಾಹಿತಿ ಬಹಿರಂಗಗೊAಡಿದೆ. ಈ ಅಪಘಾತದಲ್ಲಿ 45 ವರ್ಷದ ಪ್ರೇಮಾ ಎಸ್ ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೊದಲು ವಿದ್ಯುತ್ಕಂ ಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ
ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಬನ್ನೇರುಘಟ್ಟಲದಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್ಮೆಂಟ್ ಬಳಿಯ ಫುಟ್‌ಪಾತ್ ಮೇಲೆ ವಾಕಿಂಗ್ಮಾ ಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೃಷ್ಣ ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೃಷ್ಣ ಅವರ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತ ಪ್ರೇಮಾ ಅವರ ಶವವನ್ನು ಕಿಮ್ಸ್ಆ ಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading