Connect with us

ಕರಾವಳಿ

ಕಬ್ಬಿನಾಲೆಯಲ್ಲಿ ನಡೆದ ಎನ್‌ಕೌಂಟರ್ ನಲ್ಲಿ ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ

Published

on

ಕಬ್ಬಿನಾಲೆಯಲ್ಲಿ ನಡೆದ ಎನ್‌ಕೌಂಟರ್ ನಲ್ಲಿ ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ

ಉಡುಪಿ ನ.19(Zoom Karnataka) : ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ನಕ್ಸಲ್ ನಿಗ್ರಹ ಪಡೆ (ಎಎನ್​​ಎಫ್) ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆರಾಗಿದ್ದಾರೆ.

ಹೆಬ್ರಿ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ನಕ್ಸಲ್ ಓಡಾಟದ ಶಂಕೆ ವ್ಯಕ್ತವಾಗಿದ್ದರಿಂದ ಎಎನ್​ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆಗೆ ಇಳಿದಿತ್ತು. ಸೋಮವಾರ ತಡರಾತ್ರಿ ಎಎನ್​​ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ಗುಂಡೇಟಿಗೆ ವಿಕ್ರಂ ಗೌಡ ಬಲಿಯಾಗಿದ್ದಾರೆ.

ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ ಕಾರಣ ಎನ್​​ಕೌಂಟರ್: ಸಚಿವ ಜಿ.ಪರಮೇಶ್ವರ್
ಪೊಲೀಸರ ಮೇಲೆ ನಕ್ಸಲ್ ವಿಕ್ರಂ ಗೌಡ ತಂಡ ಗುಂಡಿನ ದಾಳಿ ಮಾಡಿದ ಕಾರಣ ಪೊಲೀಸರು ಎನ್‌ಕೌಂಟರ್ ಮಾಡಬೇಕಾಯ್ತು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಅವರನ್ನು ಪೊಲೀಸರು ಹುಡುಕುತ್ತಿದ್ದರು. ಅನೇಕ ಎನ್‌ಕೌಂಟರ್​​ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ನಿನ್ನೆ ಪೊಲೀಸರ ಮೇಲೆ ಅವರು ಗುಂಡಿನ ದಾಳಿ ಮಾಡಿದಾಗ ಎನ್‌ಕೌಂಟರ್ ಮಾಡಿದ್ದಾರೆ ಎಂದರು.

ವಿಕ್ರಂ ಗೌಡ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರಿಂದ ಅವರ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಈಗ ಖಚಿತ ಮಾಹಿತಿ‌ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ಈಗ ಸದ್ಯಕ್ಕೆ ಇಷ್ಟು ಮಾಹಿತಿ ಸಿಕ್ಕಿದೆ. ಮಧ್ಯಾಹ್ನದ ಮೇಲೆ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ತಿಳಿಸಿದರು.

ನಾವೂ ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅನ್ಕೊಂಡಿದ್ವಿ. ಆದ್ರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದರು. ಅವರಿಬ್ಬರೂ ತಪ್ಪಿಸಿಕೊಂಡು ಹೋದ್ರು ಅಂತ ಕೂಂಬಿಂಗ್ ಆಪರೇಷನ್ ನಡೆಸಲಾಯ್ತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದ ಹಾಗೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ವಿಕ್ರಂ ಗೌಡ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ಮಾತುಕತೆ ಮೂಲಕ ನಕ್ಸಲರನ್ನು ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೀತಿದೆ. ಶರಣಾಗ ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದ್ರೆ ಈ ರೀತಿ ಎನ್​ಕೌಂಟರ್ ಆಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ದಕ್ಷಿಣ ಭಾರತದಲ್ಲಿ ಕಳೆದ ಎರಡು ದಶಕಗಳಿಂದ ನಕ್ಸಲ್​ ತಂಡಗಳನ್ನು ವಿಕ್ರಂ ಗೌಡ ಮುನ್ನಡೆಸುತ್ತಿದ್ದರು. ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೊಡಗು ಸೇರಿದಂತೆ ಹಲವು ಪ್ರದೇಶಗಳಲ್ಲಿ ಈತ ಆಶ್ರಯ ಪಡೆದಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading